ಬ್ರೇಕಿಂಗ್ ನ್ಯೂಸ್
26-08-21 04:34 pm Headline Karnataka News Network ಕ್ರೈಂ
ಬೆಂಗಳೂರು, ಆ.26 : ರೌಡಿಶೀಟರ್ ಜೊತೆ ಸೇರಿ ಆಹಾರ ತಯಾರಿಕಾ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ 20 ಲಕ್ಷ ರೂ. ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಯುಟ್ಯೂಬ್ ಚಾನೆಲ್ ವರದಿಗಾರ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ರೌಡಿ ಶೀಟರ್ ಕುಳ್ಳ ರಮೇಶ್, ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್, ದುರ್ಗೇಶ, ಹರೀಶ್, ಅರವಿಂದ್ ಹಾಗೂ ವಿವೇಕ್ ಬಂಧಿತ ಆರೋಪಿಗಳು. ಮೂರು ದಿನಗಳ ಹಿಂದೆ ಸಾಯಿ ಫುಡ್ ಪ್ರೈ. ಲಿಮಿಟೆಡ್ ಎಂಬ ಕಂಪನಿಯ ಇಬ್ಬರು ಸಿಬ್ಬಂದಿಯ ವಾಹನವನ್ನು ಅಡ್ಡಗಟ್ಟಿ ಅವರದ್ದೇ ಕಾರಿನಲ್ಲಿ ಅಪಹರಿಸಿದ್ದರು. ಇಬ್ಬರನ್ನು ಬಿಡುಗಡೆ ಮಾಡಬೇಕಾದರೆ 20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಇಬ್ಬರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಸಾಯಿ ಫುಡ್ ಮಾಲೀಕರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸತತ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲದಿನಗಳ ಹಿಂದೆ ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್ ಮತ್ತು ಟೀಂ ಸಾಯಿ ಫುಡ್ ತಯಾರಿಸುತ್ತಿದ್ದ ಆಹಾರ ಪದಾರ್ಥಗಳ ಗೋಡೌನ್ ಗೆ ನುಗ್ಗಿತ್ತು. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದೀರಾ ಎಂದು ಬೆದರಿಕೆ ಹಾಕಿದ್ದರು. ಹಣ ಕೊಡದಿದ್ದರೆ ನಿಮ್ಮ ಅಕ್ರಮವನ್ನು ಯುಟ್ಯೂಬ್ಗೆ ಹಾಕುವುದಾಗಿ ಬೆದರಿಸಿದ್ದರು. ಅವಧಿ ಮುಗಿದ ಆಹಾರ ಪದಾರ್ಥಗಳು ಸಿಗದ ಕಾರಣ ಹಣ ವಸೂಲಿಗೆ ಯತ್ನಿಸಿ ವಾಪಸು ತೆರಳಿದ್ದರು. ಆನಂತರ ಅಪಹರಣ ಕೃತ್ಯ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಯುಟ್ಯೂಬ್ ಚಾನೆಲ್ ವರದಿಗಾರನ ಬೆನ್ನಟ್ಟಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಹಲವರಿಗೆ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ, ಹಣ ಪಡೆದಿರುವುದು ತಿಳಿದುಬಂದರೆ ಹೆಚ್ಚುವರಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore Police arrests six including News Youtuber kindnap and extrotion of catering company owner.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm