ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 06:56 pm
HK News Staffer
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm