ಬ್ರೇಕಿಂಗ್ ನ್ಯೂಸ್
28-08-21 12:57 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ಕರೆದು ದೃಢಪಡಿಸಿದ್ದಾರೆ. ಹೈಕೋರ್ಟ್ ಸೂಚನೆ ಪ್ರಕಾರ, ಆರೋಪಿಗಳ ಬಗ್ಗೆ ಹೆಚ್ಚು ಮಾಹಿತಿ ನೀಡಲು ಬರುವುದಿಲ್ಲ. ಆದರೆ, ಎಲ್ಲ ಕೂಲಿ ಕಾರ್ಮಿಕರು. ಚಾಲಕ, ಕಾರ್ಪೆಂಟರ್ ಇದ್ದಾರೆ. ಒಬ್ಬ ಬಾಲ ಕಾರ್ಮಿಕ ಇದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ಸತ್ಯಮಂಗಲ ಆಸುಪಾಸಿನಲ್ಲಿ ಬಾಳೆಕಾಯಿ, ತರಕಾರಿ ಬೆಳೆಯುತ್ತಾರೆ. ಅಲ್ಲಿಂದ ಮಾಲನ್ನು ಪಡೆದು ಮೈಸೂರು ಸಿಟಿಗೆ ತೆಗೆದುಕೊಂಡು ಬರುತ್ತಾರೆ. ಹಿಂತಿರುಗಿ ಹೋಗುವ ಸಂದರ್ಭದಲ್ಲಿ ರಾಬರಿ ಮಾಡುವ ರೂಢಿ ಮಾಡಿಕೊಂಡಿದ್ದರು. ಈ ವೇಳೆ, ಈ ರೀತಿಯ ಅಮಾನುಷ ಕೃತ್ಯ ಮಾಡಿದ್ದಾರೆ. ಗ್ಯಾಂಗ್ ರೇಪ್ ಮತ್ತು ಮೂರು ಲಕ್ಷ ಹಣ ಕೇಳಿದ್ದರು. ಹಣ ಸಿಗದೇ ಇದ್ದುದಕ್ಕೆ ಹಲ್ಲೆ ಮಾಡಿ ತೆರಳಿದ್ದರು. ಘಟನೆಯಲ್ಲಿ ಆರು ಜನ ಇದ್ದು, ಒಬ್ಬ ಸಿಕ್ಕಿಲ್ಲ.



ಒಬ್ಬ ಏಳನೇ ತರಗತಿ, ಇನ್ನೊಬ್ಬ ಎಂಟನೇ ತರಗತಿ ಓದಿದ್ದಾನೆ. ಇನ್ನೊಬ್ಬ ಶಾಲೆಗೇ ಹೋಗಿಲ್ಲ. ಒಬ್ಬನಿಗೆ 17 ವರ್ಷ ಆಗಿದ್ದು, ಬಾಲಾಪರಾಧಿ ಇದ್ದಾನೆ. ಆದರೆ, ನಿರ್ಭಯಾ ಪ್ರಕರಣದ ಬಳಿಕ ಜುವೆನಿಲ್ ಏಕ್ಟ್ ಬಗ್ಗೆ ಸಡಿಲಿಕೆ ಮಾಡಿದ್ದಾರೆ. ಗಂಭೀರ ಪ್ರಕರಣಗಳಲ್ಲಿ 16 ವರ್ಷದ ವರೆಗೂ ಆರೋಪಿಗಳಾಗಿ ಪರಿಗಣಿಸಬಹುದು. ಕೋರ್ಟ್ ನಲ್ಲಿ ಟ್ರಯಲ್ ಮಾಡಬಹುದು ಎಂದಿದೆ. ಅದರಂತೆ, ನಾವು ಟ್ರಯಲ್ ಮಾಡುತ್ತೇವೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.
ಆರೋಪಿಗಳು ತಿರುಪ್ಪೂರ್ ಜಿಲ್ಲೆಯ ನಿವಾಸಿಗಳು. ಆರೋಪಿಗಳ ಬಗ್ಗೆ ಹೆಸರು ಹೇಳಲು ಬರುವುದಿಲ್ಲ. ಆದಷ್ಟು ಬೇಗ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಚಾರ್ಜ್ ಶೀಟ್ ಹಾಕಲು ಸೂಚನೆ ನೀಡಿದ್ದೇನೆ. ಆದರೆ, ಪ್ರಕರಣದ ಬಗ್ಗೆ ಸಂತ್ರಸ್ತ ಯುವತಿ ಮತ್ತು ಯುವಕನಿಂದ ಹೆಚ್ಚು ಮಾಹಿತಿ ಸಿಕ್ಕಿಲ್ಲ. ಆದರೂ ಕೆಲವು ಸುಳಿವುಗಳನ್ನು ಆಧರಿಸಿ, ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಎರಡೇ ದಿನದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.
ಆಗಸ್ಟ್ 24ರಂದು ಸಂಜೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮತ್ತು ಯುವಕ ಜೊತೆಗಿದ್ದಾಗ ಐವರು ಕಾಮುಕರು ಮೇಲೆರಗಿದ್ದರು. ಮೂರು ಲಕ್ಷ ಹಣ ಕೇಳಿ, ಬಳಿಕ ಯುವಕನಿಗೆ ಹಲ್ಲೆಗೈದು ಯುವತಿಯನ್ನು ಗುಡ್ಡಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದರು. ಘಟನೆ ಮರುದಿನ ಬೆಳಕಿಗೆ ಬರುತ್ತಲೇ ರಾಜ್ಯದಲ್ಲಿ ಭಾರೀ ಆಕ್ರೋಶದ ಅಲೆ ಎಬ್ಬಿಸಿತ್ತು. ಇಡೀ ದೇಶದಲ್ಲೇ ಕ್ಲೀನ್ ಸಿಟಿಯೆಂದು ಹೆಸರು ಮಾಡಿರುವ ಮೈಸೂರಿನಲ್ಲಿ ಈ ರೀತಿಯ ಕೃತ್ಯ ಆಗಿರುವುದು ಆಘಾತ ಮೂಡಿಸಿತ್ತು. ಪ್ರಕರಣದ ಪತ್ತೆಗಾಗಿ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿತ್ತು.
Mysore gang rape case five arrested, one juvenil. All are native of thiruppur district, DG Pravin sood confirmed
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm