ಬ್ರೇಕಿಂಗ್ ನ್ಯೂಸ್
28-08-21 01:20 pm Headline Karnataka News Network ಕ್ರೈಂ
ಶಿವಮೊಗ್ಗ, ಆಗಸ್ಟ್ 28 : ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ಪ್ರಿಯತಮೆಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ನಡೆದಿದೆ.
ಕೊಲೆಯಾದ ಯುವತಿಯನ್ನು ಕವಿತಾ (21) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನ ಪ್ರೇಮಿಯನ್ನು ಶಿವಮೂರ್ತಿ (21) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಶಿವಮೂರ್ತಿ ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಹೊಸನಗರ ತಾಲೂಕಿನ ನೇರಲಗಿ ಗ್ರಾಮದ ಕವಿತಾ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಸನಗರ ತಾಲೂಕಿನ ಕಗಲಿ ಗ್ರಾಮದ ಶಿವಮೂರ್ತಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಇವರು ಇಬ್ಬರೂ 7 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿಗೆ ಕವಿತಾ, ಶಿವಮೂರ್ತಿ ಜೊತೆಗಿನ ಪ್ರೀತಿ ತೊರೆದು ಭದ್ರಾವತಿ ಮೂಲದ ಅಂಬುಲೆನ್ಸ್ ಚಾಲಕನ ಪ್ರೇಮ ಪಾಶಕ್ಕೆ ಸಿಲುಕಿದ್ದಳು. ಆನಂತರ, ಕವಿತಾ ಹಳೆ ಪ್ರೇಮಿ ಶಿವಮೂರ್ತಿಯನ್ನು ದೂರ ಮಾಡಿದ್ದಳು.
ಇದರಿಂದ ರೊಚ್ಚಿಗೆದ್ದ ಶಿವಮೂರ್ತಿ, ಬುಧವಾರ ಮಧ್ಯಾಹ್ನ ಕವಿತಾಳನ್ನು ನಿನ್ನ ಜೊತೆ ಮಾತನಾಡಬೇಕು ಎಂದು ನೇರಲಗಿ ಬಳಿಗೆ ಕರೆಯಿಸಿದ್ದಾನೆ. ಅಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು ಕವಿತಾಳನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೆ ಕವಿತಾಳನ್ನು ತಾನೇ ಕೊಲೆಗೈದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
Shivamogga Youth Killed Girlfriend and Attempts Suicide.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm