ಬ್ರೇಕಿಂಗ್ ನ್ಯೂಸ್
28-08-21 10:37 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28: ಪೊಲೀಸರು ಕಳ್ಳರನ್ನು ಹಿಡಿಯೋರು ಅಂತಾರೆ. ಹಾಗಾಗಿ, ಕಳ್ಳ ಏನಿದ್ದರೂ ಪೊಲೀಸರ ಮನೆಗಂತೂ ಕನ್ನ ಹಾಕಲು ಹೋಗಲ್ಲ. ಸಿಕ್ಕಿಬಿದ್ದರೆ ಬೆನ್ನು ಚಪ್ಪಡಿ ಮಾಡಿಕೊಳ್ಳಬೇಕು ಅಂತ ಪೊಲೀಸರ ಉಸಾಬರಿ ಬೇಡವೆಂದು ದೂರ ನಿಲ್ಲುತ್ತಾರೆ. ಆದರೆ, ಇಲ್ಲೊಬ್ಬ ಪೊಲೀಸರಿಗೇ ಮೇಷ್ಟ್ರು ಆಗಿರುವ ಇನ್ ಸ್ಪೆಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿದ್ದಾನೆ.
ಹೌದು.. ಮಂಗಳೂರಿನಲ್ಲಿ ಈ ಹಿಂದೆ ಉರ್ವಾ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ, ಸದ್ಯಕ್ಕೆ ಸಂಚಾರ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಮಹಮ್ಮದ್ ಶರೀಫ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲನ್ನು ಕಳ್ಳ ಎಗರಿಸಿದ್ದಾನೆ. ಉರ್ವಾ ಮೈದಾನದ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಒಂದನೇ ಮಹಡಿಯಲ್ಲಿ ಇನ್ ಸ್ಪೆಕ್ಟರ್ ಶರೀಫ್ ಮನೆಯಿದೆ.
ಕೆಳಗೆ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಶರೀಫ್ ಪುತ್ರನಿಗೆ ಸೇರಿದ 25 ಸಾವಿರ ಮೌಲ್ಯದ ಸೈಕಲನ್ನು ವ್ಯಕ್ತಿಯೊಬ್ಬ ಎಗರಿಸಿದ್ದಾನೆ. ಸೈಕಲನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಫ್ಲಾಟಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಈ ಬಗ್ಗೆ ಇನ್ ಸ್ಪೆಕ್ಟರ್ ಶರೀಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಕಳವು ಪೊಲೀಸರ ಮನೆಯಿಂದಲೇ ಆಗಿದ್ದರೂ, ಆ ಬಗ್ಗೆ ದೂರು ದಾಖಲು ಮಾಡಬೇಕಾದ್ದು ಪೊಲೀಸ್ ಠಾಣೆಯಲ್ಲೇ ತಾನೆ.
ಆದರೆ, ಇಲ್ಲಿ ಠಾಣೆಯ ಮುಖ್ಯಸ್ಥ ಆಗಿರುವ ಇನ್ ಸ್ಪೆಕ್ಟರ್ ಮನೆಯಿಂದಲೇ ಕಳವಾಗಿದ್ದು, ಚಾಣಾಕ್ಷ ಕಳ್ಳ ಸೈಕಲನ್ನು ಎಗರಿಸಿ ಪೊಲೀಸನಿಗೇ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಸದ್ಯಕ್ಕೆ ಸೈಕಲ್ ಕದ್ಕೊಂಡು ತೆರಳಿರುವ ಕಳ್ಳನ ಸಿಸಿಟಿವಿ ಫೋಟೋವನ್ನು ಪೊಲೀಸರು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದಾರೆ. ಸೈಕಲಿಗೆ ಸೀರಿಯಲ್ ನಂಬರ್ ಅಂತೂ ಇಲ್ಲ. ಕಳ್ಳನ ಮುಖ ನೋಡಿಯೇ ಸೈಕಲ್ ಹುಡುಕಬೇಕಷ್ಟೆ.
Man steals bicycle worth 25 thousand from Traffic Police inspectors Shariff's house in Urwa, Mangalore
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm