ಬ್ರೇಕಿಂಗ್ ನ್ಯೂಸ್
28-08-21 10:37 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28: ಪೊಲೀಸರು ಕಳ್ಳರನ್ನು ಹಿಡಿಯೋರು ಅಂತಾರೆ. ಹಾಗಾಗಿ, ಕಳ್ಳ ಏನಿದ್ದರೂ ಪೊಲೀಸರ ಮನೆಗಂತೂ ಕನ್ನ ಹಾಕಲು ಹೋಗಲ್ಲ. ಸಿಕ್ಕಿಬಿದ್ದರೆ ಬೆನ್ನು ಚಪ್ಪಡಿ ಮಾಡಿಕೊಳ್ಳಬೇಕು ಅಂತ ಪೊಲೀಸರ ಉಸಾಬರಿ ಬೇಡವೆಂದು ದೂರ ನಿಲ್ಲುತ್ತಾರೆ. ಆದರೆ, ಇಲ್ಲೊಬ್ಬ ಪೊಲೀಸರಿಗೇ ಮೇಷ್ಟ್ರು ಆಗಿರುವ ಇನ್ ಸ್ಪೆಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿದ್ದಾನೆ.
ಹೌದು.. ಮಂಗಳೂರಿನಲ್ಲಿ ಈ ಹಿಂದೆ ಉರ್ವಾ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ, ಸದ್ಯಕ್ಕೆ ಸಂಚಾರ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಮಹಮ್ಮದ್ ಶರೀಫ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲನ್ನು ಕಳ್ಳ ಎಗರಿಸಿದ್ದಾನೆ. ಉರ್ವಾ ಮೈದಾನದ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಒಂದನೇ ಮಹಡಿಯಲ್ಲಿ ಇನ್ ಸ್ಪೆಕ್ಟರ್ ಶರೀಫ್ ಮನೆಯಿದೆ.
ಕೆಳಗೆ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಶರೀಫ್ ಪುತ್ರನಿಗೆ ಸೇರಿದ 25 ಸಾವಿರ ಮೌಲ್ಯದ ಸೈಕಲನ್ನು ವ್ಯಕ್ತಿಯೊಬ್ಬ ಎಗರಿಸಿದ್ದಾನೆ. ಸೈಕಲನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಫ್ಲಾಟಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಈ ಬಗ್ಗೆ ಇನ್ ಸ್ಪೆಕ್ಟರ್ ಶರೀಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಕಳವು ಪೊಲೀಸರ ಮನೆಯಿಂದಲೇ ಆಗಿದ್ದರೂ, ಆ ಬಗ್ಗೆ ದೂರು ದಾಖಲು ಮಾಡಬೇಕಾದ್ದು ಪೊಲೀಸ್ ಠಾಣೆಯಲ್ಲೇ ತಾನೆ.
ಆದರೆ, ಇಲ್ಲಿ ಠಾಣೆಯ ಮುಖ್ಯಸ್ಥ ಆಗಿರುವ ಇನ್ ಸ್ಪೆಕ್ಟರ್ ಮನೆಯಿಂದಲೇ ಕಳವಾಗಿದ್ದು, ಚಾಣಾಕ್ಷ ಕಳ್ಳ ಸೈಕಲನ್ನು ಎಗರಿಸಿ ಪೊಲೀಸನಿಗೇ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಸದ್ಯಕ್ಕೆ ಸೈಕಲ್ ಕದ್ಕೊಂಡು ತೆರಳಿರುವ ಕಳ್ಳನ ಸಿಸಿಟಿವಿ ಫೋಟೋವನ್ನು ಪೊಲೀಸರು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದಾರೆ. ಸೈಕಲಿಗೆ ಸೀರಿಯಲ್ ನಂಬರ್ ಅಂತೂ ಇಲ್ಲ. ಕಳ್ಳನ ಮುಖ ನೋಡಿಯೇ ಸೈಕಲ್ ಹುಡುಕಬೇಕಷ್ಟೆ.
Man steals bicycle worth 25 thousand from Traffic Police inspectors Shariff's house in Urwa, Mangalore
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm