ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm