ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm