ಬ್ರೇಕಿಂಗ್ ನ್ಯೂಸ್
30-08-21 10:25 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 30: ಇನ್ಸ್ ಪೆಕ್ಟರ್ ಪುತ್ರನ ಸೈಕಲ್ ಕಳವು ಪ್ರಕರಣದ ಬೆನ್ನತ್ತಿ ಹೋದ ಬರ್ಕೆ ಠಾಣೆಯ ಪೊಲೀಸರು ಸಾವಿರಾರು ರೂಪಾಯಿ ಬೆಲೆಬಾಳುವ 9 ಸೈಕಲ್ ಗಳನ್ನು ಪತ್ತೆ ಮಾಡಿದ್ದು, ಮೂವರನ್ನು ಸೆರೆಹಿಡಿದಿದ್ದಾರೆ.
ಆಗಸ್ಟ್ 26ರಂದು ರಾತ್ರಿ ಉರ್ವಾ ಮಾರ್ಕೆಟ್ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಮನೆ ಹೊಂದಿರುವ ಟ್ರಾಫಿಕ್ ಇನ್ ಸ್ಪೆಕ್ಟರ್ ಮಹಮ್ಮದ್ ಶರೀಫ್ ಅವರ ಪುತ್ರನ ಸೈಕಲ್ ಕಳವಾಗಿತ್ತು. ಕಳ್ಳನಿಗೇನು ಗೊತ್ತು. ಇದು ಇನ್ಸ್ ಪೆಕ್ಟರ್ ಪುತ್ರನ ಸೈಕಲ್ ಎಂದು. ಕಳ್ಳ ಎಂದಿನಂತೆ, ಫ್ಲಾಟ್ ಕೆಳಗೆ ಪಾರ್ಕಿಂಗ್ ನಲ್ಲಿ ಇರಿಸಿದ್ದ ಸೈಕಲನ್ನು ಎಗರಿಸಿಕೊಂಡು ಹೋಗಿದ್ದ. ಸೈಕಲ್ ಎತ್ತಿಕೊಂಡು ಹೋಗಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿತ್ತು.


ಸಿಸಿಟಿವಿ ಫೋಟೋ ಹಿಡಿದು ಬರ್ಕೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ರಾತ್ರಿ ವೇಳೆ ಅಡ್ಡಾಡುತ್ತಿದ್ದ ಪುಂಡು ಪೋಕರಿಗಳು ಸಿಕ್ಕಿಬಿದ್ದಿದ್ದಾರೆ. ಉರ್ವಾ ಮಾರ್ಕೆಟ್ ಆಸುಪಾಸಿನಲ್ಲಿ ಅಡ್ಡಾಡುತ್ತಿದ್ದ ಒಬ್ಬಾತನನ್ನು ಹಿಡಿದು ಬಾಯಿ ಬಿಡಿಸಿದಾಗ ಸೈಕಲ್ ಕಳವು ಜಾಲದ ಕತೆ ಹೊರಬಿದ್ದಿದೆ.
ಇವರು ಹಗಲು ಹೊತ್ತಿನಲ್ಲಿ ಇಸ್ಪೀಟ್ ಆಡುವುದು, ಪುಂಡು ಪೋಕರಿಗಳ ರೀತಿ ಅಡ್ಡಾಡುವುದು, ರಾತ್ರಿ ವೇಳೆ ಕುಡಿದು ಟೈಟ್ ಆಗಿ ಮಲಗುತ್ತಿದ್ದರು. ಸಿಕ್ಕ ಸಿಕ್ಕಲ್ಲಿ ಮಲಗುತ್ತಿದ್ದ ಇವರಿಗೆ ಲೋಕದ ಪರಿವೆ ಇರಲಿಲ್ಲ. ಹಣಕ್ಕಾಗಿ ಸಣ್ಣಪುಟ್ಟ ಕಳ್ಳತನ ಮಾಡುತ್ತಿದ್ದರು. ಇವರಿಗೆ ಸುಲಭದಲ್ಲಿ ದಕ್ಕಿದ್ದು ಅಪಾರ್ಟ್ಮೆಂಟ್ ಕೆಳಗಡೆ ನಿಲ್ಲಿಸುತ್ತಿದ್ದ ಸೈಕಲ್ ಗಳು. 20 ಸಾವಿರ, 30 ಸಾವಿರ ಬೆಲೆಯ ಸೈಕಲನ್ನು ಎತ್ತಿಕೊಂಡು ಹೋಗಿ ಅದರ ಬೆಲೆಯೇ ಗೊತ್ತಿಲ್ಲದೆ 500, ಒಂದು ಸಾವಿರ ರೂ.ಗೆ ಮಾರುತ್ತಿದ್ದರು. ಇವರಿಗೆ ಆಯಾ ದಿನದ ಖರ್ಚಿಗೆ ಸಿಕ್ಕರೆ ಸಾಕಿತ್ತು.
ಸದ್ಯಕ್ಕೆ ಮೂವರನ್ನು ಬಂಧಿಸಿ, 9 ಸೈಕಲ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಮೂಲದ ಹನುಮಂತ(35), ಶಿವಮೊಗ್ಗ ಜಿಲ್ಲೆ ವಿನೋಬಾ ನಗರದ ಮಂಜುರಾಜ್ (29), ಕುತ್ತಾರ್ ನಿವಾಸಿ ಶಂಕರ ಶೆಟ್ಟಿ (66) ಬಂಧಿತರಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಮಾನ್ಯವಾಗಿ ಸೈಕಲ್ ಕಳವಾದರೆ, ಯಾರು ಕೂಡ ಪೊಲೀಸ್ ದೂರು ಕೊಡುವುದಿಲ್ಲ. ಹೀಗಾಗಿ ಸೈಕಲನ್ನು ಕದಿಯುವುದನ್ನು ಆರೋಪಿಗಳು ಸುಲಭದ ದಾರಿ ಮಾಡಿಕೊಂಡಿದ್ದರು.
ಪೊಲೀಸ್ ಇನ್ಸ್ ಪೆಕ್ಟರ್ ಮನೆಗೇ ಕನ್ನ ! ಸೈಕಲ್ ಎಗರಿಸಿ ಪರಾರಿಯಾದ ಕಳ್ಳ !!
Three persons were arrested for stealing a bicycle from an apartment in Urwa. On August 28, the accused stole the bicycle from the apartment. The cycle belonged to a police inspector’s son. The arrested are identified as Hanumantha (30) from Haveri, Manjuraj (29) from Shivamogga and Shankar Shetty (66) from Kuthar.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm