ಬ್ರೇಕಿಂಗ್ ನ್ಯೂಸ್
31-08-21 01:04 pm Headline Karnataka News Network ಕ್ರೈಂ
ದಾವಣಗೆರೆ, ಆಗಸ್ಟ್ 31: ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಪತ್ನಿಯನ್ನೇ ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಜರುಗಿದೆ.
40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ. ಈ ಕುರಿತು ತನಿಖೆ ನಡೆಸಿದ ಹೊನ್ನಾಳಿ ಸಿಪಿಐ ದೇವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದು ಬಂದ ಪತಿ ಗಿರೀಶ್, ಊಟ ನೀಡುವಂತೆ ಪತ್ನಿ ಶಿಲ್ಪಾಳ ಬಳಿ ಕ್ಯಾತೆ ತೆಗೆದು ಜಗಳ ಮಾಡಿದ್ದಾನೆ. ಈ ವೇಳೆ ಊಟ ನೀಡದ ಶಿಲ್ಪಾ ಮದ್ಯಪಾನ ಮಾಡ್ಬೇಡ ಎಂದು ಬುದ್ಧಿವಾದ ಹೇಳಿದ್ದಾಳೆ. ನಶೆಯಲ್ಲಿದ್ದ ಗಿರೀಶ್ ಪತ್ನಿಗೆ ಹೊಡೆದು, ಕುತ್ತಿಗೆಗೆ ನೇಣು ಬಿಗಿಯಲು ಮುಂದಾಗಿದ್ದಾನೆ. ಶಿಲ್ಪಾ ಕಾಲಿನಿಂದ ಒದ್ದಿದ್ದು, ಗಿರೀಶ್ಗೆ ಗಾಯಗಳಾಗಿದೆ. ಗಾಯಗೊಂಡರೂ ಬಿಡದ ಆತ ನಂತರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಗಿರೀಶ್ ಪತ್ನಿಯನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ. ದಂಪತಿಯ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕೊಲೆ ಮಾಡಿ ಮನೆಯಿಂದ ಕಾಲ್ಕಿತ್ತು ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಜನರಿಂದ ಮಾಹಿತಿ ಪಡೆದ ಹೊನ್ನಾಳಿ ಪೋಲಿಸರು ಆಸ್ಪತ್ರೆಗೆ ಬಂಧಿಸಲು ಧಾವಿಸುವಷ್ಟರಲ್ಲಿ ಆತ ಕಾಲ್ಕಿತ್ತಿದ್ದಾನೆ.
ಆರೋಪಿಯ ಜಾಡು ಹಿಡಿದು ಹೋದ ಪೊಲೀಸರು ಕೊನೆಗೂ ಶಿಕಾರಿಪುರ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Davanagere Husband kills wife for advising not to drink. Husband has been arrested by police.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm