ಬ್ರೇಕಿಂಗ್ ನ್ಯೂಸ್
31-08-21 05:46 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 31: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ನಗರದ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಸಾವು ಕಂಡವರು. ರವಿರಾಜ್ ಅವರನ್ನು ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.











ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.





ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Mangalore Ullal Pocso case accused jumps from sixth floor in Mangalore court dies on spot in the court complex. The deceased has been identified as Raviraj
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm