ಬ್ರೇಕಿಂಗ್ ನ್ಯೂಸ್
31-08-21 05:46 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 31: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ನಗರದ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಸಾವು ಕಂಡವರು. ರವಿರಾಜ್ ಅವರನ್ನು ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.











ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.





ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Mangalore Ullal Pocso case accused jumps from sixth floor in Mangalore court dies on spot in the court complex. The deceased has been identified as Raviraj
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm