ಬ್ರೇಕಿಂಗ್ ನ್ಯೂಸ್
31-08-21 05:46 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 31: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ನಗರದ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಸಾವು ಕಂಡವರು. ರವಿರಾಜ್ ಅವರನ್ನು ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.











ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.





ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Mangalore Ullal Pocso case accused jumps from sixth floor in Mangalore court dies on spot in the court complex. The deceased has been identified as Raviraj
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm