ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm