ಬ್ರೇಕಿಂಗ್ ನ್ಯೂಸ್
02-09-21 02:45 pm Mangaluru Correspondent ಕ್ರೈಂ
ಮಂಗಳೂರು, ಸೆ.2: ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದ ಯುವತಿಗೆ ಮೋಸ ಮಾಡಿದ್ದಲ್ಲದೆ, ಆಕೆಯಿಂದಲೇ ಹಣ ಸಾಲ ಪಡೆದು ವಂಚಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಜಗನ್ನಾಥ್ ಎಸ್. ಸಜ್ಜನರ್ (34) ಎಂಬಾತ ವಂಚಿಸಿ ಸಿಕ್ಕಿಬಿದ್ದ ಯುವಕ. ಈತನನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ತನಗೆ ವಂಚನೆ ಆಗಿರುವ ಬಗ್ಗೆ ಸುರತ್ಕಲ್, ಮಧ್ಯ ಗ್ರಾಮದ ನಿವಾಸಿ ನಾಗಶ್ರೀ ಎಂಬ ಯುವತಿ ಪೊಲೀಸ್ ದೂರು ನೀಡಿದ್ದರು.
ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ಹೇಳಿಕೊಂಡಿದ್ದ ಜಗನ್ನಾಥ್, ತಾನು ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ತಾನು ಮದುವೆಯಾಗುತ್ತೇನೆ ಎಂದು ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ. ಆನಂತರ ಫ್ಲ್ಯಾಟ್ ಖರೀದಿಸಬೇಕೆಂದು ಹೇಳಿ ಯುವತಿಯಿಂದಲೇ ಹಣ ಸಾಲ ಪಡೆದಿದ್ದಾನೆ.

ನಾಗಶ್ರೀ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯಿಂದ ಮೂರು ಲಕ್ಷ ರೂಪಾಯಿ ಹಣವನ್ನು ಸಾಲ ಪಡೆದಿದ್ದ. ಆಕೆ, ತನ್ನ ಚಿನ್ನವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು ಮೂರು ಲಕ್ಷ ರೂ. ಹಣವನ್ನು ಜಗನ್ನಾಥ್ ಗೆ ನೀಡಿದ್ದ. ಆನಂತರ, ಈ ನಡುವೆ ಒಂದೂವರೆ ಲಕ್ಷ ರೂಪಾಯಿಯನ್ನು ಯುವತಿಗೆ ಮರಳಿಸಿದ್ದ. ಆದರೆ, ಸ್ವಲ್ಪ ದಿನಗಳ ನಂತರ ಯುವತಿಯನ್ನು ನಂಬಿಸಿ ಆ ಹಣವನ್ನೂ ಮರಳಿ ಪಡೆದಿದ್ದ.

ಹಣ ಪಡೆದು ಹೋದ ಜಗನ್ನಾಥ್ ನಾಪತ್ತೆಯಾಗಿದ್ದರಿಂದ ಮೋಸಗೊಂಡಿದ್ದನ್ನು ತಿಳಿದು, ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಯುವತಿ ನೇರವಾಗಿ ಹೆಣ್ಣೂರು ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆತ ಬಹಳಷ್ಟು ಯುವತಿಯರಿಗೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಮೋಸ ಎಸಗಿದ್ದು ತಿಳಿದುಬಂದಿದೆ. ರಾಜ್ಯದ ವಿವಿಧ ಕಡೆ ಹತ್ತಕ್ಕೂ ಹೆಚ್ಚು ಠಾಣೆಗಳಲ್ಲಿ ಜಗನ್ನಾಥ್ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿವೆ.
Hennur Police on Wednesday arrested a 34-year-old man who allegedly cheated woman on a matrimonial site by pretending to be a civil engineer. The accused, identified as Jagannath S Sajjanar, had come out of prison on bail barely eight months ago and resumed his criminal activities since then, police said. Jagannath is a resident of Ullal, but originally hails from Vijayapura.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm