ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm