ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm