ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm