ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm