ಬ್ರೇಕಿಂಗ್ ನ್ಯೂಸ್
06-09-21 07:27 pm Headline Karnataka News Network ಕ್ರೈಂ
ನವದೆಹಲಿ, ಸೆ.6 : ಮಹಿಳೆಯ ಜೊತೆ ಅಫೇರ್ ಹೊಂದಿದ್ದ ಯುವಕನೊಬ್ಬ ಆಕೆಯನ್ನು ಮದುವೆಯಾಗದಿದ್ದರೆ, ತನ್ನ ಮೇಲೆ ರೇಪ್ ಕೇಸ್ ಕೊಡುತ್ತಾಳೆಂಬ ಭಯದಲ್ಲಿ ಮಹಿಳೆಯನ್ನೇ ಭೀಭತ್ಸವಾಗಿ ಕೊಲೆಗೈದು ಮುಖವನ್ನು ಗುರುತು ಸಿಗದಂತೆ ಜಜ್ಜಿಹಾಕಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಸೂರತ್ ಪೊಲೀಸರು 38 ವರ್ಷದ ವಿನಯ್ ರಾಯ್ ಎಂಬ ಬಿಹಾರ ಮೂಲದ ಯುವಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ನಂದೂರ್ ಬಾರ್ ರೈಲು ಹಳಿಯ ಬಳಿ ಕುತ್ತಿಗೆ ಸೀಳಿ, ಮುಖದ ಚರ್ಮವನ್ನು ಸುಲಿದು ಗುರುತು ಸಿಗದಂತೆ ಮಾಡಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೂಲತಃ ಬಿಹಾರದವನಾಗಿರುವ ವಿನಯ್ ರಾಯ್, ಸೂರತ್ ನಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರಜ್ ಎಂಬ ಗ್ರಾಮದಲ್ಲಿ ವಾಸವಿದ್ದ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳನ್ನು ಹೊಂದಿದ್ದ. ಈ ನಡುವೆ, ಬೇರೊಬ್ಬ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ಸಂಬಂಧವನ್ನೂ ಇಟ್ಟುಕೊಂಡಿದ್ದ. ಇವರ ನಡುವೆ ಇತ್ತೀಚೆಗೆ ಜಟಾಪಟಿ ನಡೆದಿದ್ದು, ತನ್ನನ್ನು ಮದುವೆಯಾಗದಿದ್ದರೆ ಅತ್ಯಾಚಾರ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆಕೆಗೆ ಈ ಹಿಂದೆಯೂ ಬೇರೊಬ್ಬನ ಜೊತೆ ಸಂಪರ್ಕ ಇದ್ದುದು ತಿಳಿದುಬಂದಿತ್ತು. ಅಲ್ಲದೆ, ಆ ಬಗ್ಗೆ ವ್ಯಕ್ತಿಯ ವಿರುದ್ಧ ಅತ್ಯಾಚಾರ ದೂರು ನೀಡಿ, ಜೈಲು ಪಾಲಾಗುವಂತೆ ಮಾಡಿದ್ದಳು. ಹಳೆ ವಿಚಾರವನ್ನು ಹೇಳುತ್ತಾ ತನ್ನನ್ನು ಮದುವೆಯಾಗದಿದ್ದರೆ, ನಿನ್ನ ವಿರುದ್ಧವೂ ಅತ್ಯಾಚಾರ ಕೇಸು ದಾಖಲಿಸುವುದಾಗಿ ಬೆದರಿಸಿದ್ದಳು. ಹಾಗಾಗಿ ಆಕೆಯನ್ನು ಮುಗಿಸಲು ಪ್ಲಾನ್ ಹಾಕಿ, ನಂದೂರ್ ಬಾರ್ ಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ನಂದೂರ್ ಬಾರ್ ರೈಲು ಹಳಿಯ ಬಳಿ ಮಹಿಳೆಯ ಶವ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ, ಮಹಿಳೆ ಮತ್ತು ಆಕೆಯನ್ನು ಕೊಲೆಗೈದ ಆರೋಪಿ ಇಬ್ಬರೂ ಸೂರತ್ ನವರು ಅನ್ನೋದು ಗೊತ್ತಾಗಿತ್ತು. ಸೂರತ್ ಪೊಲೀಸರು ಬೆನ್ನತ್ತಿದ್ದು, ಆರೋಪಿ ವಿನಯ್ ರಾಯ್ ಕೈವಾಡ ಕಂಡುಬಂದು ವಿಚಾರಣೆ ನಡೆಸಿದಾಗ ಮಹಿಳೆಯನ್ನು ವಿಕೃತವಾಗಿ ಕೊಂದು ಹಾಕಿರುವ ವಿಚಾರ ಬಯಲಾಗಿದೆ.
A 38-year-old man has allegedly murdered a woman with whom he was having an affair - afraid that she might lodge a complaint of rape against him if he did not marry her.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm