ಬ್ರೇಕಿಂಗ್ ನ್ಯೂಸ್
07-09-21 02:20 pm Headline Karnataka News Network ಕ್ರೈಂ
ಕೊಚ್ಚಿ, ಸೆ.7: ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿರುವ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅನಾಮಧೇಯರಿಂದ ಇ-ಮೇಲ್ ಸಂದೇಶ ಬಂದಿದ್ದು, ನೌಕಾನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕಳೆದ 20 ದಿನಗಳಲ್ಲಿ ಶಿಪ್ ಯಾರ್ಡ್ ಅಧಿಕೃತ ಮೇಲ್ ಗೆ ಎರಡನೇ ಬಾರಿ ಈ ರೀತಿ ಬೆದರಿಕೆ ಸಂದೇಶ ಬಂದಿದ್ದು ಈ ಬಗ್ಗೆ ಎರ್ನಾಕುಲಂ ಪೊಲೀಸರು ಸೈಬರ್ ಅಪರಾಧದಡಿ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ನೌಕಾನೆಲೆಯಲ್ಲಿ ಕರಾವಳಿ ಕಾವಲು ಪಡೆ ಸೇರಿದಂತೆ ವಿವಿಧ ಕೇಂದ್ರೀಯ ಏಜನ್ಸಿಗಳು ತಪಾಸಣೆಯಲ್ಲಿ ತೊಡಗಿವೆ.


ಕಳೆದ ಜುಲೈ ತಿಂಗಳಲ್ಲಿ ಶಿಪ್ ಯಾರ್ಡ್ ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಅಫ್ಘಾನಿಸ್ತಾನ ಮೂಲದ ಈದ್ ಗುಲ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ವೀಸಾ ಅವಧಿ ಮುಗಿದರೂ, ಪೋರ್ಜರಿ ಮಾಡಿದ್ದ ದಾಖಲೆ ಇಟ್ಟುಕೊಂಡು ಶಿಪ್ ಯಾರ್ಡ್ ನಲ್ಲಿ ಉಳಿದುಕೊಂಡಿರುವ ಬಗ್ಗೆ ಅಲ್ಲಿನ ಅಧಿಕಾರಿಗಳು ಎಚ್ಚತ್ತುಕೊಂಡ ಕೂಡಲೇ ಈದ್ ಗುಲ್ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದ. ಆನಂತರ ಎನ್ಐಎ ಅಧಿಕಾರಿಗಳು ಆತನ ಹಿಂದೆ ಬಿದ್ದು ಕೊಲ್ಕತ್ತಾದಲ್ಲಿ ಬಂಧಿಸಿದ್ದರು. ಆತನ ಬಂಧನದ ಬೆನ್ನಲ್ಲೇ ಆಗಸ್ಟ್ ತಿಂಗಳಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಅಫ್ಘಾನಿಸ್ತಾನದ ಪ್ರಜೆಯ ಬಂಧನಕ್ಕೂ ಈ ರೀತಿಯ ಇಮೇಲ್ ಬೆದರಿಕೆಗೂ ಸಂಬಂಧ ಇದೆಯಾ ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ಇದಕ್ಕೂ ಮುನ್ನ 2019ರಲ್ಲಿ ಶಿಪ್ ಯಾರ್ಡ್ ನಲ್ಲಿ ಪೈಂಟಿಂಗ್ ಕಾರ್ಮಿಕರಾಗಿ ಬಂದಿದ್ದ ಬಿಹಾರ ಮತ್ತು ರಾಜಸ್ಥಾನ ಮೂಲದ ಇಬ್ಬರು ಇಲೆಕ್ಟ್ರೋನಿಕ್ ಉಪಕರಣ ಒಂದನ್ನು ಐಎನ್ಎಸ್ ವಿಕ್ರಾಂತ್ ನೌಕೆಯ ಒಳಗೆ ಇರಿಸಿದ್ದು ಕಂಡುಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದರು.
12 ವರ್ಷಗಳ ಸತತ ಪ್ರಯತ್ನದಿಂದಾಗಿ ಐಎನ್ಎಸ್ ವಿಕ್ರಾಂತ್ ಹೆಸರಿನ ಬೃಹತ್ ನೌಕೆಯನ್ನು ಭಾರತೀಯ ನೌಕಾಪಡೆ ನಿರ್ಮಿಸಿದ್ದು, ತಿಂಗಳ ಹಿಂದಷ್ಟೇ ಅದನ್ನು ಸಮುದ್ರ ಮಧ್ಯದಲ್ಲಿ ಯಶಸ್ವಿಯಾಗಿ ಟ್ರಯಲ್ ನಡೆಸಲಾಗಿತ್ತು. ಈ ನೌಕೆಗೆ ಸುಮಾರು 23 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ.
The police have registered cases under cyber terrorism after Cochin Shipyard received e-mails twice in the past 20 days, warning of bombs going off in the shipyard where the indigenous aircraft carrier (IAC) that will be christened INS Vikrant and is undergoing sea trials, was built.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm