ಬ್ರೇಕಿಂಗ್ ನ್ಯೂಸ್
07-09-21 02:20 pm Headline Karnataka News Network ಕ್ರೈಂ
ಕೊಚ್ಚಿ, ಸೆ.7: ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿರುವ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅನಾಮಧೇಯರಿಂದ ಇ-ಮೇಲ್ ಸಂದೇಶ ಬಂದಿದ್ದು, ನೌಕಾನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕಳೆದ 20 ದಿನಗಳಲ್ಲಿ ಶಿಪ್ ಯಾರ್ಡ್ ಅಧಿಕೃತ ಮೇಲ್ ಗೆ ಎರಡನೇ ಬಾರಿ ಈ ರೀತಿ ಬೆದರಿಕೆ ಸಂದೇಶ ಬಂದಿದ್ದು ಈ ಬಗ್ಗೆ ಎರ್ನಾಕುಲಂ ಪೊಲೀಸರು ಸೈಬರ್ ಅಪರಾಧದಡಿ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ನೌಕಾನೆಲೆಯಲ್ಲಿ ಕರಾವಳಿ ಕಾವಲು ಪಡೆ ಸೇರಿದಂತೆ ವಿವಿಧ ಕೇಂದ್ರೀಯ ಏಜನ್ಸಿಗಳು ತಪಾಸಣೆಯಲ್ಲಿ ತೊಡಗಿವೆ.


ಕಳೆದ ಜುಲೈ ತಿಂಗಳಲ್ಲಿ ಶಿಪ್ ಯಾರ್ಡ್ ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಅಫ್ಘಾನಿಸ್ತಾನ ಮೂಲದ ಈದ್ ಗುಲ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ವೀಸಾ ಅವಧಿ ಮುಗಿದರೂ, ಪೋರ್ಜರಿ ಮಾಡಿದ್ದ ದಾಖಲೆ ಇಟ್ಟುಕೊಂಡು ಶಿಪ್ ಯಾರ್ಡ್ ನಲ್ಲಿ ಉಳಿದುಕೊಂಡಿರುವ ಬಗ್ಗೆ ಅಲ್ಲಿನ ಅಧಿಕಾರಿಗಳು ಎಚ್ಚತ್ತುಕೊಂಡ ಕೂಡಲೇ ಈದ್ ಗುಲ್ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದ. ಆನಂತರ ಎನ್ಐಎ ಅಧಿಕಾರಿಗಳು ಆತನ ಹಿಂದೆ ಬಿದ್ದು ಕೊಲ್ಕತ್ತಾದಲ್ಲಿ ಬಂಧಿಸಿದ್ದರು. ಆತನ ಬಂಧನದ ಬೆನ್ನಲ್ಲೇ ಆಗಸ್ಟ್ ತಿಂಗಳಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಅಫ್ಘಾನಿಸ್ತಾನದ ಪ್ರಜೆಯ ಬಂಧನಕ್ಕೂ ಈ ರೀತಿಯ ಇಮೇಲ್ ಬೆದರಿಕೆಗೂ ಸಂಬಂಧ ಇದೆಯಾ ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ಇದಕ್ಕೂ ಮುನ್ನ 2019ರಲ್ಲಿ ಶಿಪ್ ಯಾರ್ಡ್ ನಲ್ಲಿ ಪೈಂಟಿಂಗ್ ಕಾರ್ಮಿಕರಾಗಿ ಬಂದಿದ್ದ ಬಿಹಾರ ಮತ್ತು ರಾಜಸ್ಥಾನ ಮೂಲದ ಇಬ್ಬರು ಇಲೆಕ್ಟ್ರೋನಿಕ್ ಉಪಕರಣ ಒಂದನ್ನು ಐಎನ್ಎಸ್ ವಿಕ್ರಾಂತ್ ನೌಕೆಯ ಒಳಗೆ ಇರಿಸಿದ್ದು ಕಂಡುಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದರು.
12 ವರ್ಷಗಳ ಸತತ ಪ್ರಯತ್ನದಿಂದಾಗಿ ಐಎನ್ಎಸ್ ವಿಕ್ರಾಂತ್ ಹೆಸರಿನ ಬೃಹತ್ ನೌಕೆಯನ್ನು ಭಾರತೀಯ ನೌಕಾಪಡೆ ನಿರ್ಮಿಸಿದ್ದು, ತಿಂಗಳ ಹಿಂದಷ್ಟೇ ಅದನ್ನು ಸಮುದ್ರ ಮಧ್ಯದಲ್ಲಿ ಯಶಸ್ವಿಯಾಗಿ ಟ್ರಯಲ್ ನಡೆಸಲಾಗಿತ್ತು. ಈ ನೌಕೆಗೆ ಸುಮಾರು 23 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ.
The police have registered cases under cyber terrorism after Cochin Shipyard received e-mails twice in the past 20 days, warning of bombs going off in the shipyard where the indigenous aircraft carrier (IAC) that will be christened INS Vikrant and is undergoing sea trials, was built.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm