ಬ್ರೇಕಿಂಗ್ ನ್ಯೂಸ್
07-09-21 05:53 pm Headline Karnataka News Network ಕ್ರೈಂ
ಕೊಲಂಬೋ, ಸೆ.7: ಪಾಕಿಸ್ಥಾನ ಮೂಲದ ಏಳು ಮಂದಿ ನಿವಾಸಿಗಳು ಮೀನುಗಾರರ ಸೋಗಿನಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಸಾಗಿಸುತ್ತಿದ್ದ ಪ್ರಕರಣವನ್ನು ಶ್ರೀಲಂಕಾದ ನೌಕಾಪಡೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಮುದ್ರ ಮಧ್ಯೆ ಪತ್ತೆಯಾಗಿದ್ದ ಮೀನುಗಾರಿಕೆ ಬೋಟನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಬರೋಬ್ಬರಿ 336 ಕೇಜಿ ಹೆರಾಯಿನ್ ಡ್ರಗ್ಸ್ ಪತ್ತೆಯಾಗಿದ್ದು ಏಳು ಮಂದಿ ಪಾಕಿಸ್ಥಾನೀಯರನ್ನು ಬಂಧಿಸಿದ್ದಾರೆ.
ಶ್ರೀಲಂಕಾದ ಮಾಲೆ ದ್ವೀಪದ ಬಳಿ ಪಾಕಿಸ್ಥಾನೀಯರು ಶ್ರೀಲಂಕಾದ ಬೋಟಿಗೆ ಹೆರಾಯಿನ್ ತುಂಬಿಸುತ್ತಿದ್ದಾಗ ನೌಕಾಪಡೆಯ ಕಣ್ಣಿಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. 336 ಕೇಜಿ ಹೆರಾಯಿನ್ ಮೌಲ್ಯ ಭಾರತದ ಕರೆನ್ಸಿಯಲ್ಲಿ 3.1 ಬಿಲಿಯನ್ ರೂಪಾಯಿ ಆಗುತ್ತದೆ. ಭಾರೀ ಪ್ರಮಾಣದ ಹೆರಾಯಿನ್ ದ್ರವ್ಯವನ್ನು ಪಾಕಿಸ್ಥಾನದಿಂದ ಮೀನುಗಾರಿಕಾ ಬೋಟಿನಲ್ಲಿ ಒಯ್ದು ಇನ್ನೊಂದು ಬೋಟಿಗೆ ತುಂಬಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬೋಟಿನಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿರುವ ಬಗ್ಗೆ ಮಾಹಿತಿಗಳಿಲ್ಲ.
ಕಳೆದ ಡಿಸೆಂಬರ್ ತಿಂಗಳಲ್ಲಿ ಇದೇ ರೀತಿ 2.5 ಬಿಲಿಯನ್ ರೂಪಾಯಿ ಮೌಲ್ಯದ ಹೆರಾಯಿನನ್ನು ಶ್ರೀಲಂಕಾ ನೌಕಾಪಡೆ ಅಧಿಕಾರಿಗಳು ಸಮುದ್ರ ಮಧ್ಯೆ ಪತ್ತೆ ಮಾಡಿದ್ದರು. ನಾಲ್ಕು ಮಂದಿ ಪಾಕಿಸ್ಥಾನ ಮೂಲದವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಡ್ರಗ್ಸನ್ನು ಪಾಕಿಸ್ಥಾನದ ಗ್ವಾದರ್ ಬಂದರಿನಿಂದ ತರಲಾಗಿತ್ತು ಅನ್ನೋ ಮಾಹಿತಿ ಬಯಲಾಗಿತ್ತು. ಗ್ವಾದರ್ ಬಂದರು ಚೀನಾ ಹಿಡಿತದಲ್ಲಿದ್ದು, ಅಲ್ಲಿಂದ ಹೆರಾಯಿನನ್ನು ತಂದು ಶ್ರೀಲಂಕಾ ಮೂಲದ ಬೋಟ್ ಗಳ ಮೂಲಕ ಸಾಗಿಸುತ್ತಿದ್ದರು.
ಪಾಕಿಸ್ಥಾನದಿಂದ ಡ್ರಗ್ಸ್ ಸರಬರಾಜು ಅಂತಾರಾಷ್ಟ್ರೀಯ ಮಾಫಿಯಾ ಆಗಿದ್ದು, ಭಾರತ ಮತ್ತು ಶ್ರೀಲಂಕಾಗೆ ಇದೇ ರೀತಿ ಮೀನುಗಾರಿಕಾ ಬೋಟ್ ಗಳಲ್ಲಿಯೇ ಡ್ರಗ್ಸ್ ಪೂರೈಕೆ ಆಗುತ್ತಾ ಇದೆ ಎನ್ನುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
The Sri Lankan Navy has seized 336 Kilogram of heroin from a trawler in the high seas off the coast of Male on September 1. The navy had apprehended the trawler in the high seas and brought the same to capital Colombo on September 4. Seven Pakistani nationals who were aboard this trawler have also been taken into custody.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm