ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am