ಬ್ರೇಕಿಂಗ್ ನ್ಯೂಸ್
08-09-21 10:53 am Headline Karnataka News Network ಕ್ರೈಂ
ಇಸ್ರೇಲ್, ಸೆ.8: ಊಟಕ್ಕೆ ಬಳಸುವ ಚಮಚಾಗಳನ್ನೇ ಆಯುಧಗಳನ್ನಾಗಿಸಿ ಅತಿ ಭದ್ರತೆಯ ಜೈಲಿನ ನೆಲ ಹಾಸನ್ನು ಅಗೆದು ಸುರಂಗ ಕೊರೆದು, ಆರು ಕೈದಿಗಳು ಹಾಲಿವುಡ್ ಸಿನಿಮಾ ಶೈಲಿಯಲ್ಲಿ ಪರಾರಿಯಾಗಿರುವ ಪ್ರಕರಣ ಇಸ್ರೇಲ್ನಲ್ಲಿ ನಡೆದಿದೆ.
ಇಸ್ರೇಲಿಗಳ ಮೇಲೆ ದಾಳಿ, ಹತ್ಯೆ ಸಂಚು, ಹತ್ಯೆ ಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಪ್ಯಾಲಿಸ್ತೇನಿಯ ಆರು ಉಗ್ರರನ್ನು ಅತ್ಯಂತ ಬಿಗಿಭದ್ರತೆಯ ಗಿಲ್ಬೋವಾ ಜೈಲಿನಲ್ಲಿ ಇರಿಸಲಾಗಿತ್ತು. ಅವರೆಲ್ಲರೂ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಯುವಕರಾಗಿದ್ದ ಈ ಉಗ್ರರು ಶಿಕ್ಷೆ ಪೂರೈಸುವ ಹೊತ್ತಿಗೆ ವೃದ್ಧರಾಗುತ್ತಿದ್ದರು. ತಮಗೆ ಉಳಿಗಾಲ ಇಲ್ಲವೆಂದು ಅರಿತ ಪಾತಕಿಗಳು ಸಾವನ್ನು ಲೆಕ್ಕಿಸದೇ ಜೈಲಿನ ನೆಲಹಾಸು ಕೊರೆದು ಪರಾರಿಯಾಗಿದ್ದಾರೆ.



ಕಾಂಕ್ರಿಟ್ ಹಾಸನ್ನು ಚಮಚದಂತಹ ಸಣ್ಣ ಆಯುಧಗಳಿಂದ ಅಗೆದಿದ್ದಾರೆ. ಟಾಯ್ಲೆಟ್ ಪಕ್ಕದಲ್ಲಿ ಮೆತ್ತನೆಯ ಜಾಗ ನೋಡಿ ಹಲವು ದಿನಗಳ ಕಾಲ ಸುರಂಗ ಕೊರೆದು ಪಾರಾಗಿದ್ದಾರೆ. ತೀವ್ರ ತಪಾಸಣೆಯ ಜೈಲಿನಲ್ಲಿ ಅಷ್ಟೊಂದು ದೊಡ್ಡ ಸುರಂಗ ಕೊರೆದು ಪರಾರಿಯಾಗಿದ್ದು ನಿಜಕ್ಕೂ ಅಚ್ಚರಿಯಾಗಿದೆ ಎಂದು ಇಸ್ರೇಲಿ ಅಧಿಕಾರಿಗಳೇ ಹುಬ್ಬೇರಿಸಿದ್ದಾರೆ.
ರಾತ್ರಿ ನಡೆದ ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತ ಇಸ್ರೇಲಿ ಭದ್ರತಾ ಪಡೆಗಳು, ಪರಾರಿಯಾದವರ ಶೋಧ ಕಾರ್ಯಕ್ಕೆ ಇಳಿದಿವೆ. ಬೆಳಗಿನ ಜಾವ ತಾನು ಜಾಮೀನಿನಲ್ಲಿ ಆಗಂತುಕರನ್ನು ಕಂಡಿರುವುದಾಗಿ ದಕ್ಷಿಣ ಇಸ್ರೇಲ್ನ ರೈತನೊಬ್ಬ ಮಾಹಿತಿ ನೀಡಿದ್ದು, ಆ ಭಾಗದತ್ತ ವಿಶೇಷ ತುಕಡಿಗಳನ್ನು ಕಳಿಸಲಾಗಿದೆ. ಏತನ್ಮಧ್ಯೆ, ಇಸ್ರೇಲಿ ಉಕ್ಕಿನ ಕೋಟೆ ಭೇದಿಸಿದ ಜಿಹಾದಿಗಳ ಸಾಹಸಕ್ಕೆ ಪ್ಯಾಲೆಸ್ತೇನಿ ಜನರು ಭಾರಿ ಸಂಭ್ರಮಾಚರಣೆ ಮಾಡಿದ್ದಾರೆ. ಗಾಜಾ ಪಟ್ಟಿ ಸೇರಿದಂತೆ ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಜನ ಸಂಭ್ರಮಿಸಿದ್ದಾರೆ.
Israel launched a massive manhunt in the country's north and the occupied West Bank early Monday after six Palestinian prisoners tunneled out of their cell and escaped from a high-security facility in the biggest prison break of its kind in decades.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm