ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm