ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm