ಬ್ರೇಕಿಂಗ್ ನ್ಯೂಸ್
09-09-21 09:54 pm Headline Karnataka News Network ಕ್ರೈಂ
'ನಮಸ್ತೆ ಲಂಡನ್' ಸೇರಿ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಅಲಂಕೃತಾ ಸಹಾಯ್ ಮನೆಗೆ ನುಗ್ಗಿ ನಟಿಯನ್ನು ಹೊಡೆದು ಹಣ, ಒಡವೆ ದೋಚಿ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ.
ಬಾಲಿವುಡ್ ನಟಿ ಅಲಂಕೃತಾ ಸಹಾಯ್ ಚಂಡೀಘಡದ ತಮ್ಮ ಹೊಸ ಮನೆಯಲ್ಲಿ ಒಬ್ಬರೇ ಇರುವ ಸಮಯದಲ್ಲಿ ಮನೆಗೆ ನುಗ್ಗಿದ ಮೂವರು ದರೋಡೆಕೋರರು ನಟಿಗೆ ಚಾಕು ತೋರಿಸಿ ಹೆದರಿಸಿದ್ದಾರೆ, ಹಲ್ಲೆ ಸಹ ಮಾಡಿದ್ದಾರೆ. ನಟಿಯು ಹೆಗೊ ತಪ್ಪಿಸಿಕೊಂಡು ತಮ್ಮ ರೂಮ್ ಸೇರಿಕೊಂಡಿದ್ದಾಳೆ, ರೂಮ್ನ ಒಳಗೂ ನುಗ್ಗಿದಾಗ ಬಾತ್ರೂಂ ಸೇರಿಕೊಂಡಿದ್ದಾಳೆ.
ಆದರೆ ದರೋಡೆಕೋರರು ನಟಿಯನ್ನು ಹೆದರಿಸಿ, ಪ್ರಾಣ, ಮಾನ ಬೆದರಿಕೆ ಹಾಕಿ ಆಕೆಯ ಎಟಿಎಂ ಕಾರ್ಡ್, ಪಿನ್ ನಂಬರ್, ಮನೆಯಲ್ಲಿದ್ದ ಹಣ ಚಿನ್ನಗಳನ್ನು ದೋಚಿಕೊಂಡು ಹೋಗಿದ್ದಾರೆ.

ಅಲಂಕೃತಾ ಸಹಾಯ್ ಕೆಲವು ದಿನಗಳ ಹಿಂದಷ್ಟೆ ಚಂಡೀಘಡದ ಸೆಕ್ಟರ್ 27 ನಲ್ಲಿ ಹೊಸ ಮನೆ ಖರೀದಿಸಿದ್ದರು. ಮಧ್ಯಾಹ್ನದ ವೇಳೆ ಕೆಲಸದ ಮಹಿಳೆ ಮನೆಗೆ ಬರಲೆಂದು ಮನೆಯ ಬಾಗಿಲನ್ನು ತೆರೆದಿಟ್ಟದ್ದರು. ಇದೇ ಅವಕಾಶವನ್ನು ಬಳಸಿಕೊಂಡು ದರೋಡೆಕೋರರು ಮನೆಗೆ ನುಗ್ಗಿದ್ದಾರೆ.
ದರೋಡೆಕೋರರು ಮನೆಗೆ ನುಗ್ಗಿದ ಸಮಯದಲ್ಲಿ ಮನೆಯಲ್ಲಿ ಅಲಂಕೃತಾ ಒಬ್ಬರೇ ಇದ್ದರು. ಆ ಮನೆಯಲ್ಲಿ ಅಲಂಕೃತಾ ತನ್ನ ಪೋಷಕರೊಂದಿಗೆ ವಾಸವಿದ್ದಾರೆ. ಆದರೆ ಅವರ ಪೋಷಕರು ಕೆಲ ದಿನಗಳ ಹಿಂದಷ್ಟೆ ಪ್ರವಾಸ ಹೋಗಿದ್ದರು. ಹಾಗಾಗಿ ಅಲಂಕೃತಾ ಒಬ್ಬರೇ ಮನೆಯಲ್ಲಿದ್ದರು.
ಪ್ರಕರಣದ ಬಗ್ಗೆ ನಟಿ ಅಲಂಕೃತಾ ಸೆಕ್ಟರ್ 26 ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೊಲೀಸರು ಮನೆಯ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಮೂವರು ದರೋಡೆಕೋರರಲ್ಲಿ ಒಬ್ಬನು ಕೆಲವು ದಿನಗಳ ಹಿಂದಷ್ಟೆ ನಟಿಯ ಮನೆಗೆ ಬಂದಿದ್ದ ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಹೊಸ ಮನೆಗೆ ಕೆಲವು ಪೀಠೋಪಕರಣಗಳನ್ನು ಅಲಂಕೃತಾ ತರಿಸಿಕೊಂಡಿದ್ದರು. ಪೀಠೋಪಕರಣಗಳನ್ನು ಡೆಲಿವರಿ ಮಾಡಲು ಆತ ಮನೆಗೆ ಹೋಗಿದ್ದ. ಮನೆಯನ್ನು ಚೆನ್ನಾಗಿ ನೋಡಿಕೊಂಡು ಕೆಲವರು ದುರುಳರನ್ನು ಜೊತೆ ಮಾಡಿಕೊಂಡು ಮನೆ ದೋಚಲು ಬಂದಿದ್ದ. ಆತನನ್ನು ಪೊಲೀಸರು ಹುಡುಕುತ್ತಿದ್ದಾರೆ.
In a broad daylight incident, three miscreants allegedly robbed model-turned-actress Alankrita Sahai of Rs 6 lakh at knifepoint at her house in Sector 27. One of the suspects has been identified by the victim. The police said the complainant had shifted to the city around a month ago. She and her parents had rented the second floor of the house and the victim’s parents were out of the city for the past 10 days.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm