ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm