ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm