ಬ್ರೇಕಿಂಗ್ ನ್ಯೂಸ್
15-09-21 02:50 pm Headline Karnataka News Network ಕ್ರೈಂ
ನವದೆಹಲಿ, ಸೆ.15: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಬೆಂಬಲಿತ ಆರು ಭಯೋತ್ಪಾದಕರನ್ನು ದೆಹಲಿ ಪೊಲೀಸರು ಬಂಧನ ಮಾಡಿದ್ದು, ಈ ಮೂಲಕ ಹಬ್ಬದ ಸಂದರ್ಭದಲ್ಲಿ ನಡೆಯಲಿದ್ದ ಭಾರೀ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದ್ದಾರೆ. ಬಂಧಿತ ಆರು ಮಂದಿ ಉಗ್ರರು ಪಾಕ್ನ ಐಎಸ್ಐ ಬೆಂಬಲಿತ, ಐಎಸ್ಐ ನಿಂದ ತರಬೇತಿ ಪಡೆದವರು ಎಂದು ಮಾಧ್ಯಮದ ವರದಿಗಳು ಹೇಳಿದೆ.
ದೆಹಲಿ, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಈ ಭಯೋತ್ಪಾದಕರು ಬಾಂಬ್ ಸ್ಪೋಟ ನಡೆಸಲು ಸಂಚು ಹೂಡಿದ್ದರು ಎಂದು ಹೇಳಲಾಗಿದೆ. ಅದು ಕೂಡಾ "ಗಣೇಶ ಚತುರ್ಥಿ, ನವರಾತ್ರಿ, ರಾಮ್ಲೀಲಾ ಹಬ್ಬದ ಸಂದರ್ಭದಲ್ಲಿ ಅಧಿಕ ಜನರು ಜೊತೆ ಸೇರುವ ಹಿನ್ನೆಲೆ ಈ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದರು," ಪೊಲೀಸರು ತಿಳಿಸಿದ್ದಾರೆ.
ದಾವೂದ್ ಇಬ್ರಾಹಿಂನ ಸಹೋದರನಾದ ಪಾಕಿಸ್ತಾನ ಮೂಲದ ಅನೀಸ್ ಇಬ್ರಾಹಿಂ ತನ್ನ ಈ ಭಯೋತ್ಪಾದಕ ದಾಳಿಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಂಡರ್ವರ್ಲ್ಡ್ (ಭೂಗತ) ಜೊತೆ ಸಂಪರ್ಕದಲ್ಲಿದ್ದನು. ನಾವು ಈ ಬಂಧಿತ ಶಂಕಿತ ಭಯೋತ್ಪಾದಕರನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಪಾಕಿಸ್ತಾನದ ಭಯೋತ್ಪಾದಕ ಘಟಕಗಳು ಎರಡು ಘಟಕಗಳ ಮೂಲಕ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ. ಒಂದು ಭೂಗತ ಮೂಲದಿಂದ ಮತ್ತೊಂದು ಪಾಕ್ನ ಐಎಸ್ಐನಿಂದ ತರಬೇತಿ ಪಡೆದ ಭಯೋತ್ಪಾದಕ ಘಟಕವಾಗಿದೆ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.




ಬಂಧಿತ ಭಯೋತ್ಪಾದಕರು ಯಾರ್ಯಾರು?
ಬಂಧಿತರನ್ನು ಜಾನ್ ಮೊಹಮ್ಮದ್ ಶೇಕ್ (47), ಅಲಿಯಾಸ್ ಸಮೀರ್ ಒಸಾಮಾ (22), ಮೂಲ್ಚಂದ್ (47), ಜೀಶನ್ ಕಮಾರ್ (28), ಮೊಹಮ್ಮದ್ ಅಬು ಬಕಾರ್ (23) ಹಾಗೂ ಮೊಹಮ್ಮದ್ ಅಮೀರ್ ಜಾವೇದ್ (31) ಎಂದು ಗುರುತಿಸಲಾಗಿದೆ. ಈ ಆರು ಮಂದಿ ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶ ಹಾಗೂ ನವದೆಹಲಿಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಇನ್ನು ಬಂಧಿತರ ಪೈಕಿ ಒಸಾಮಾ ಹಾಗೂ ಕಮಾರ್ ಪಾಕಿಸ್ತಾನದಿಂದ ತರಬೇತಿ ಪಡೆದ ಭಯೋತ್ಪಾದಕರು, ಪಾಕಿಸ್ತಾನದ ಅಂತರ ಸೇವೆಗಳ ಗುಪ್ತಚರ ಇಲಾಖೆಯ ಸೂಚನೆಯಂತೆ ಇವರಿಬ್ಬರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ನವದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಐಇಡಿ ಬಾಂಬ್ಗಳನ್ನು ಇಡಲು ಸರಿಯಾದ ಸ್ಥಳವನ್ನು ನೋಡಿ ಸೂಚಿಸುವ ಕಾರ್ಯವನ್ನು ಈ ಇಬ್ಬರು ಭಯೋತ್ಪಾದಕರಿಗೆ ನೀಡಲಾಗಿತ್ತು,' ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮವನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ ವಿಶೇಷ ಪೊಲೀಸ್ ಆಯುಕ್ತರು ನೀರಜ್ ಕುಮಾರ್ ಠಾಕೂರ್, 'ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ನಡೆಸಿ ನಾವು ಒಟ್ಟು ಆರು ಮಂದಿಯನ್ನು ಬಂಧನ ಮಾಡಿದ್ದೇವೆ. ಈ ಪೈಕಿ ಇಬ್ಬರು ಪಾಕಿಸ್ತಾನದಿಂದ ತರಬೇತಿ ಪಡೆದ ಭಯೋತ್ಪಾದಕರು ಆಗಿದ್ದಾರೆ. ಅಲಿಯಾಸ್ ಸಮೀರ್ ಒಸಾಮಾ ಹಾಗೂ ಜೀಶನ್ ಕಮಾರ್ ಈ ವರ್ಷದಲ್ಲಿ ಪಾಕಿಸ್ತಾನಕ್ಕೆ ಹೋಗಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಭಾರತಕ್ಕೆ ಆಗಮಿಸಿದ್ದಾರೆ,' ಎಂದು ಮಾಹಿತಿ ನೀಡಿದ್ದಾರೆ. 'ಪಾಕ್ ಬೆಂಬಲಿತ ಹಾಗೂ ಪಾಕ್ ಪ್ರಾಯೋಜಿತ ಗುಂಪು ಭಾರತದಲ್ಲಿ ಸರಣಿ ಐಇಡಿ ಬಾಂಬ್ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ನಮಗೆ ಕೇಂದ್ರದ ಏಜೆನ್ಸಿಗಳಿಂದ ಮಾಹಿತಿ ಲಭಿಸಿದೆ,' ಎಂದು ಕೂಡಾ ಪೊಲೀಸರು ಹೇಳಿದ್ದಾರೆ.


ಸ್ಪೋಟಕಗಳು ಪೊಲೀಸ್ ವಶಕ್ಕೆ;
'ಈ ಪೈಕಿ ನಾಲ್ವರ ಬಂಧನದಿಂದಾಗಿ ಪಾಕಿಸ್ತಾನದ ಐಎಸ್ಐ ಬೆಂಬಲ ಇರುವುದು ಹಾಗೂ ಅದರಿಂದ ತರಬೇತಿ ಪಡೆದಿರುವುದು ತಿಳಿದು ಬಂದಿದೆ. ಭೂಗತ ಮೂಲಗಳ ಸಂಪರ್ಕವೂ ಇತ್ತು ಎಂದು ತಿಳಿದು ಬಂದಿದೆ. ಹಾಗೆಯೇ ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಹಲವು ರಾಜ್ಯಗಳಲ್ಲಿ ಬಾಂಬ್ ದಾಳಿ ನಡೆಸಲು ಈ ಭಯೋತ್ಪಾದಕರು ಸಂಚು ಮಾಡಿದ್ದಾರೆ,' ಎಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾ ತಿಳಿಸಿದ್ದಾರೆ. 'ಉತ್ತರ ಪ್ರದೇಶದ ಅಲಹಾಬಾದ್ನಲ್ಲಿದ್ದ ಸ್ಪೋಟಕಗಳನ್ನು ನಾವು ವಶಕ್ಕೆ ಪಡೆದಿದ್ದೇವೆ. ಈ ಎಲ್ಲಾ ಬಂಧಿತರಿಗೂ ಭಯೋತ್ಪಾದಕ ದಾಳಿಗೆ ಬೇರೆ ಬೇರೆ ಜವಾಬ್ದಾರಿಯನ್ನು ಉಗ್ರ ಸಂಘಟನೆಗಳು ಹಂಚಿದ್ದವು,' ಎಂದು ಕೂಡಾ ಹೇಳಿದ್ದಾರೆ.


ಭಯೋತ್ಪಾದಕರಿಗೆ ಯಾರಿಂದ ತರಬೇತಿ?
'ಒಸಾಮಾ ಎಪ್ರಿಲ್ 22 ರಂದು ಲಕ್ನೋದಿಂದ ವಿಮಾನದ ಮೂಲಕ ಮಸ್ಕತ್ಗೆ ಹೋಗಿದ್ದಾರೆ. ಬಳಿಕ ಅಲ್ಲಿ ಜೀಶನ್ ಕಮಾರ್ನನ್ನು ಭೇಟಿಯಾಗಿದ್ದಾನೆ. ಜೀಶನ್ ಕಮಾರ್ ಕೂಡಾ ಭಾರತಕ್ಕೆ ತರಬೇತಿಗಾಗಿ ಬಂದಿದ್ದನು. ಮಸ್ಕತ್ನಿಂದ ಈ ಇಬ್ಬರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಪಾಕಿಸ್ತಾನದ ತಾಟ್ಟದಲ್ಲಿ ಫಾರ್ಮ್ ಹೌಸ್ನಲ್ಲಿ ಇವರಿಬ್ಬರು ನೆಲೆಸಿದ್ದರು. ಮೂವರು ಪಾಕಿಸ್ತಾನಿಗಳ ಜೊತೆ ಅವರು ಆ ಫಾರ್ಮ್ ಹೌಸ್ನಲ್ಲಿ ನೆಲೆಸಿದ್ದರು. ಆ ಪೈಕಿ ಇಬ್ಬರು ಜಬ್ಬರ್ ಹಾಗೂ ಹಂಝ. ಈ ಇಬ್ಬರು ಪಾಕಿಸ್ತಾನಿಗಳು ಜೀಶನ್ ಹಾಗೂ ಒಸಾಮಾಗೆ ತರಬೇತಿ ನೀಡಿದ್ದಾರೆ. ಹಾಗೆಯೇ ತಮ್ಮನ್ನು ತಾವು ಪಾಕಿಸ್ತಾನದ ಮಿಲಿಟರಿ ಪಡೆಯವರು ಎಂದು ಹೇಳಿದ್ದಾರೆ. ಮಿಲಿಟರಿ ಯೂನಿಫಾರ್ಮ್ ಅನ್ನು ಕೂಡಾ ಅವರು ಧರಿಸಿದ್ದರು ಎಂದು ವಿಚಾರಣೆಯ ವೇಳೆ ತಿಳಿದು ಬಂದಿದೆ,' ಎಂದು ಪೊಲೀಸರು ವಿವರಣೆ ನೀಡಿದ್ದಾರೆ.
'ಇಬ್ಬರಿಗೂ 15 ದಿನಗಳ ಕಾಲ ಬಾಂಬ್ ತಯಾರಿ ಮಾಡುವುದು ಹೇಗೆ ಎಂದು ತರಬೇತಿ ನೀಡಲಾಗಿದೆ. ಹಾಗೆಯೇ ಐಇಡಿ ತಯಾರಿ ತರಬೇತಿಯನ್ನು ಕೂಡಾ ನೀಡಲಾಗಿದೆ. ಬಂದೂಕುಗಳನ್ನು ಯಾವ ರೀತಿಯಲ್ಲಿ ಬಳಸಬೇಕು ಎಂದು ಕೂಡಾ ಇಬ್ಬರಿಗೆ ತರಬೇತಿ ನೀಡಲಾಗಿದೆ. ಇನ್ನು ಈ ಇಬ್ಬರು ಮಸ್ಕತ್ಗೆ ತಲುಪಿದ ಬಳಿಕ ಬಾಂಗ್ಲಾದೇಶದ ಸುಮಾರು 15-16 ಬೆಂಗಾಳಿ ಮಾತನಾಡುವ ಜನರನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗಿದೆ. ಇವರೆಲ್ಲರೂ ಬಳಿಕ ಗುಂಪುಗಳಲ್ಲಿ ವಿಂಗಡನೆಯಾಗಿದ್ದಾರೆ. ಆದರೆ ಒಸಾಮಾ ಹಾಗೂ ಕಮಾರ್ ಒಂದೇ ಗುಂಪಿನಲ್ಲಿ ಉಳಿದಿದ್ದಾರೆ,' ಎನ್ನಲಾಗಿದೆ. ಇನ್ನು ಶೇಕ್ ಹಾಗೂ ಮೂಲ್ಚಂದ್ಗೆ ದೆಹಲಿಯಲ್ಲಿ, ಮುಂಬನಲ್ಲಿ ಹಾಗೂ ಬೇರೆ ಪ್ರದೇಶದಲ್ಲಿ ಸ್ಪೋಟಕ, ಬಂದೂಕುಗಳನ್ನು ನೀಡಲು ಜವಾಬ್ದಾರಿಯನ್ನು ನೀಡಲಾಗಿತ್ತು ಎಂದು ಹೇಳಲಾಗಿದೆ. ಈ ಭಯೋತ್ಪಾದಕರು ಹಬ್ಬದ ಸಂದರ್ಭದಲ್ಲಿ ಅಧಿಕ ಜನರು ಸೇರುವ ದೊಡ್ಡ ಮೈದಾನಗಳಲ್ಲಿ ಐಇಡಿಗಳನ್ನು ಇರಿಸುವ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳ ವರದಿ ಹೇಳಿದೆ.
The Delhi Police's Special Cell has busted a Pakistan-organised terror module and arrested six, including two Pakistan-trained suspected terrorists, officials said on Tuesday. Deputy Commissioner of Police (Special Cell) Pramod Singh Kushwah said, "Pakistan-organised terror module has been busted." RDX-fitted IEDs (improvised explosive device) have been recovered from them in a multi-state operation, the Delhi Police said.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm