ಬ್ರೇಕಿಂಗ್ ನ್ಯೂಸ್
18-09-21 11:34 am Headline Karnataka News Network ಕ್ರೈಂ
ಮೈಸೂರು, ಸೆ: 18: ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿನೇಶ್ ಫಾರಂ ಹೌಸ್ನ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರಿ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತೆಯ ತಾಯಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.


ಮಗಳ ಮೇಲೆ ನಜೀಮನಿಂದ ಅತ್ಯಾಚಾರ ಆಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಫಾರಂನ ಮ್ಯಾನೇಜರ್ ನಾಗರಾಜುಗೆ ಕರೆ ಮಾಡಿದಾಗ ಕೂಡಲೇ ಬಂದ ಅವರು ಪೊಲೀಸರಿಗೆ ದೂರು ನೀಡಿರೆಂದು ಸಲಹೆ ನೀಡಿ ಅವರೇ ದೂರು ಸಹ ಕೊಡಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A lady has filed a complaint with the city police, alleging that her minor daughter was raped in Vinesh Farmhouse owned by actor Darshan. The police have registered a first information report. It is said that a person who works in the stable for horses in the farmhouse had raped a minor girl belonging to a family of Shivamogga origin which worked in the said farmhouse.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm