ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm