ಬ್ರೇಕಿಂಗ್ ನ್ಯೂಸ್
20-09-21 10:38 am Mangaluru Correspondent ಕ್ರೈಂ
ಉಳ್ಳಾಲ, ಸೆ.20: ಉಳ್ಳಾಲ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಪಂಚಲೋಹದ ಮೊಗವನ್ನ ಕಳ್ಳರು ಎಗರಿಸಿದ್ದಾರೆ.
ಮಾಸ್ತಿಕಟ್ಟೆಯ ತೀಯ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಗುಡಿಯ ಬಾಗಿಲ ಬೀಗ ಒಡೆದು ಪಂಚಲೋಹದ ಮೊಗವನ್ನ ಕಳವು ಮಾಡಲಾಗಿದೆ. ಮೊಗವನ್ನ ಕ್ಷೇತ್ರಕ್ಕೆ ದಾನ ಮಾಡಿದ್ದ ಹತ್ತಿರದ ಮನೆಯ ನಿವಾಸಿ ನವೀನ್ ಡಿ ಕುಟ್ಟಪ್ಪ ಅವರು ಬೆಳಗ್ಗೆ ವಾಕಿಂಗ್ ಮಾಡುವಾಗ ಅಣ್ಣಪ್ಪನ ಗುಡಿಯ ಬಾಗಿಲು ತೆರೆದಿರುವುದನ್ನ ಕಂಡಿದ್ದಾರೆ. ಕೂಡಲೇ ಅವರು ದೈವಸ್ಥಾನದ ಮುಖ್ಯ ಅರ್ಚಕರಾದ ಭುಜಂಗ ಅವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರ್ಚಕರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ದೈವಸ್ಥಾನದ ಹತ್ತಿರದ ಜಾಗೃತ ವಿವಿಧೋದ್ದೇಶ ಸಂಘ ಇನ್ನಿತರ ಮಳಿಗೆಗಳ ಸಿಸಿ ಕ್ಯಾಮೆರಾ ಫೂಟೇಜನ್ನ ತಪಾಸಣೆ
ನಡೆಸುತ್ತಿದ್ದಾರೆ.



ಕೇವಲ ಮೊಗವನ್ನ ಮಾತ್ರ ಕದ್ದೊಯ್ದರು !
ಅಣ್ಣಪ್ಪ ದೈವದ ಗುಡಿಯ ಬೀಗ ಒಡೆದ ಕಳ್ಳರು ಒಳಗಿದ್ದ ಸುಮಾರು ಒಂದು ಲಕ್ಷ ಬೆಳೆ ಬಾಳುವ ಪಂಚ ಲೋಹದ ಮೊಗವನ್ನು ಮಾತ್ರ ಎಗರಿಸಿ ಅಲ್ಲಿದ್ದ ಪ್ರಭಾವಳಿ, ಬೆಳ್ಳಿ ಮತ್ತು ಲೋಹದ ಕಡ್ಸಲೆ ಇತರ ದೈವೀ ಪರಿಕರಗಳನ್ನು ಹಾಗೇ ಬಿಟ್ಟು ಹೋಗಿದ್ದಾರೆ. ಕಳ್ಳರು ದೈವಸ್ಥಾನದ ಪ್ರಾಂಗಣದಲ್ಲಿರುವ
ಪಾಡಂಗರ ಭಗವತಿ ಗುಡಿಯ ಬಾಗಿಲ ಬೀಗವನ್ನೂ ಮುರಿಯಲು ಪ್ರಯತ್ನಿಸಿ ವಿಫಲವಾಗಿದ್ದು ಕಂಡುಬಂದಿದೆ.
ಉಳ್ಳಾಲದಂತಹ ಸೂಕ್ಷ್ಮ ಪ್ರದೇಶದಲ್ಲಿ ಹಿಂದೂಗಳ ನಂಬಿಕೆಗೆ ಘಾಸಿ ಉಂಟಾಗುವ ಕುಕೃತ್ಯಗಳು ನಡೆಯುತ್ತಿದ್ದು ಪೊಲೀಸರು ಆದಷ್ಟು ಶೀಘ್ರನೆ ಕಳ್ಳತನ ನಡೆಸಿದ ಆರೋಪಿಗಳನ್ನ ಬಂಧಿಸಬೇಕೆಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಆಗ್ರಹಿಸಿದ್ದಾರೆ.




ಕಾರಣೀಕ ಕ್ಷೇತ್ರ ಪೂಮಾಲೆ ಭಗವತಿ
ಕ್ಷೇತ್ರದ ಪರಿವಾರ ದೈವ ನಾಗನ ಗುಡಿಯ ನಾಗನ ಕಲ್ಲನ್ನು ವರುಷಗಳ ಹಿಂದೆ ನಾಲ್ವರು ಅನ್ಯಮತೀಯರು ಸಮೀಪದ ಬಾವಿಗೆ ಎಸೆದಿದ್ದರಂತೆ. ಅದರ ಪ್ರತಿಫಲವಾಗಿ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನುಳಿದವರು ಕಷ್ಟಕ್ಕೆ ತುತ್ತಾಗಿ ಕ್ಷೇತ್ರಕ್ಕೆ ತಪ್ಪು ಕಾಣಿಕೆ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಣ್ಣಪ್ಪ ದೈವವೂ ಕಾರಣಿಕ ಶಕ್ತಿಯಾಗಿದ್ದು ಅದರಿಂದಲೇ ಅತೀ ಶೀಘ್ರದಲ್ಲಿ ಕಳ್ಳನ ಬಂಧನವಾಗುವುದೆಂದು ದೈವಸ್ಥಾನದ ಅರ್ಚಕರು ಹೇಳಿದ್ದಾರೆ.
Ullal Padangra Bhagavathi temple robbery lakhs worth idol stolen. When the priest opened the temple in the morning lakhs worth idol was missing. The ullal police are now investigating the case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm