ಬ್ರೇಕಿಂಗ್ ನ್ಯೂಸ್
20-09-21 01:07 pm Headline Karnataka News Network ಕ್ರೈಂ
ಕಾಸರಗೋಡು, ಸೆ.20: ಎಂಟನೇ ಕ್ಲಾಸ್ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎನ್ನಲಾದ ಅಡೂರು ಮೂಲದ ಶಿಕ್ಷಕನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಉಸ್ಮಾನ್ (25) ಬಂಧಿತ ಆರೋಪಿ.
ಅದೇ ಶಾಲೆಯ ಎಂಟಲೇ ಕ್ಲಾಸ್ ವಿದ್ಯಾರ್ಥಿನಿ ಸೆ.8ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆನಂತರ, ಈಕೆಯ ಸಾವಿಗೆ ಶಿಕ್ಷಕನ ಕಿರುಕುಳ ಕಾರಣ ಎನ್ನುವ ಆರೋಪ ಕೇಳಿಬಂದಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಮತ್ತು ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿದ್ದರು. ಕೇಸು ದಾಖಲಾಗುತ್ತಲೇ ಆರೋಪಿ ಉಸ್ಮಾನ್ ನಾಪತ್ತೆಯಾಗಿದ್ದ. ಪೊಲೀಸರು ಮೊಬೈಲ್ ಟ್ರೇಸ್ ಮಾಡಿದಾಗ, ಮುಂಬೈನಲ್ಲಿರುವುದು ಗೊತ್ತಾಗಿ ಅಲ್ಲಿಗೆ ತೆರಳಿದ ಸ್ಪೆಷಲ್ ಬ್ರಾಂಚ್ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಉಸ್ಮಾನ್ ಸಂಭಾಷಣೆ ನಡೆಸುತ್ತಿದ್ದ ಆಡಿಯೋ ಮೆಸೇಜ್ ಮತ್ತು ಇನ್ನಿತರ ಸಂದೇಶಗಳು ಜಾಲತಾಣದಲ್ಲಿ ಲೀಕ್ ಆಗಿದ್ದು ವಿದ್ಯಾರ್ಥಿನಿಗೆ ಮುಜುಗರ ಸೃಷ್ಟಿಸಿತ್ತು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು. ವಿಚಾರಣೆ ವೇಳೆ ಆರೋಪಿ ಉಸ್ಮಾನ್, ವಿದ್ಯಾರ್ಥಿನಿಯ ಜೊತೆ ಆಡಿಯೋ ಮೆಸೇಜ್ ಮಾಡುತ್ತಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಗಿ ತಿಳಿದುಬಂದೆ. ಅಲ್ಲದೆ, ಅಪ್ರಾಪ್ತ ಬಾಲಕಿಗೆ ಕಾಮುಕ ಶಿಕ್ಷಕನೇ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಇದರಿಂದ ತೀವ್ರ ಆಘಾತಕ್ಕೀಡಾಗಿದ್ದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಳು. ಹುಡುಗಿಯ ಮೊಬೈಲ್ ಫೋನ್ ಮತ್ತು ಯುವಕನ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ
The police here on Sunday September 19 arrested a male teacher in connection with the alleged suicide of an eighth standard female student. The arrested man has been identified as A Usman (25), a teacher at a private school in Melparamba here. He is a resident of Adoor.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm