ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm