ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm