ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm