ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm