ಬ್ರೇಕಿಂಗ್ ನ್ಯೂಸ್
            
                        09-09-20 09:17 pm Headline Karnataka News Network ಕ್ರೈಂ
            ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm