ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm