ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm