ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm