ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm