ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್ನಲ್ಲಿ ಕರೆದೊಯ್ದು ನಂತರ ಬಸ್ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm