ಬ್ರೇಕಿಂಗ್ ನ್ಯೂಸ್
25-09-21 03:35 pm Headline Karnataka News Network ಕ್ರೈಂ
ನವದೆಹಲಿ, ಸೆ.25: ನವರಾತ್ರಿ ಉತ್ಸವದ ದಿನಗಳಲ್ಲಿ ಪಾಕಿಸ್ಥಾನದ ಐಎಸ್ಐ ಪ್ರೇರಿತ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ಕೇಂದ್ರೀಯ ಗುಪ್ತಚರ ಏಜನ್ಸಿಗಳು ಮತ್ತೆ ಎಚ್ಚರಿಕೆ ನೀಡಿವೆ. ಇದರಂತೆ, ದೇಶಾದ್ಯಂತ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಭದ್ರತಾ ಏಜನ್ಸಿಗಳನ್ನು ಕಟ್ಟೆಚ್ಚರ ಇರುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಸೆ.18ರಂದು ಸೆಂಟ್ರಲ್ ಇಂಟೆಲಿಜೆನ್ಸಿಯಿಂದ ಅಧಿಕೃತ ಸೂಚನೆ ಬಂದಿದ್ದು, ದೇಶದ ಎಲ್ಲ ರಾಜ್ಯಗಳ ಪ್ರಮುಖ ನಗರಗಳು, ಜನನಿಬಿಡ ಪ್ರದೇಶಗಳಲ್ಲಿ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಟಿಫಿನ್ ಮಾದರಿಯಲ್ಲಿ ಬಾಂಬ್ ಇಡುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ ನಲ್ಲಿಟ್ಟು ಸ್ಫೋಟಿಸಲು ಸಂಚು ಮಾಡಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.



ನವರಾತ್ರಿ ಸಂದರ್ಭದಲ್ಲಿ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ನಿಗಾ ಇಡಬೇಕು. ಟಿಫಿನ್ ಬಾಕ್ಸ್ ಆಗಿರಬಹುದು ಅಥವಾ ಲಾಜಿಸ್ಟಿಕ್ಸ್ ಗಳಲ್ಲಿ ಬರುವಂತಹ ಪಾರ್ಸಲ್ ಬಾಕ್ಸ್ ಗಳಲ್ಲಿಯೂ ಬಾಂಬ್ ಇರಬಹುದು ಎಂದು ಗುಪ್ತಚರ ಏಜನ್ಸಿ ಎಲರ್ಟ್ ಸಂದೇಶದಲ್ಲಿ ಹೇಳಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಇತ್ತೀಚೆಗಷ್ಟೇ, ಕಳೆದ ಸೆ.14ರಂದು ದೆಹಲಿ ಪೊಲೀಸರು ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರು ಮಂದಿಯನ್ನು ಬಂಧಿಸಿದ್ದರು. ಪ್ರಕರಣ ಸಂಬಂಧಿಸಿ ಹಲವರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅದರಲ್ಲಿ ಇಬ್ಬರು ಉಗ್ರರು ಪಾಕಿಸ್ಥಾನದಲ್ಲಿ ಐಎಸ್ಐ ಪ್ರೇರಿತರಾಗಿ ಬಾಂಬ್ ಸ್ಫೋಟ, ರೈಫಲ್ ಬಳಕೆ ಬಗ್ಗೆ ತರಬೇತಿ ಪಡೆದು ಬಂದಿದ್ದರು ಎನ್ನುವುದು ಬಯಲಾಗಿತ್ತು. ಅದರ ಬೆನ್ನಲ್ಲೇ ನವರಾತ್ರಿ ಮತ್ತು ಉತ್ಸವ ಸಂದರ್ಭದಲ್ಲಿ ಭಾರೀ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಏಜನ್ಸಿಗಳು ದೇಶದಲ್ಲಿ ಮತ್ತೆ ಎಲರ್ಟ್ ಘೋಷಣೆ ಮಾಡಿದೆ.
Pakistan's spy agency Inter-Services Intelligence (ISI) is reportedly planning to carry out a big terror strike in the country during the festival season, a crucial Intelligence alert has revealed.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm