ಬ್ರೇಕಿಂಗ್ ನ್ಯೂಸ್
25-09-21 03:35 pm Headline Karnataka News Network ಕ್ರೈಂ
ನವದೆಹಲಿ, ಸೆ.25: ನವರಾತ್ರಿ ಉತ್ಸವದ ದಿನಗಳಲ್ಲಿ ಪಾಕಿಸ್ಥಾನದ ಐಎಸ್ಐ ಪ್ರೇರಿತ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ಕೇಂದ್ರೀಯ ಗುಪ್ತಚರ ಏಜನ್ಸಿಗಳು ಮತ್ತೆ ಎಚ್ಚರಿಕೆ ನೀಡಿವೆ. ಇದರಂತೆ, ದೇಶಾದ್ಯಂತ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಭದ್ರತಾ ಏಜನ್ಸಿಗಳನ್ನು ಕಟ್ಟೆಚ್ಚರ ಇರುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಸೆ.18ರಂದು ಸೆಂಟ್ರಲ್ ಇಂಟೆಲಿಜೆನ್ಸಿಯಿಂದ ಅಧಿಕೃತ ಸೂಚನೆ ಬಂದಿದ್ದು, ದೇಶದ ಎಲ್ಲ ರಾಜ್ಯಗಳ ಪ್ರಮುಖ ನಗರಗಳು, ಜನನಿಬಿಡ ಪ್ರದೇಶಗಳಲ್ಲಿ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಟಿಫಿನ್ ಮಾದರಿಯಲ್ಲಿ ಬಾಂಬ್ ಇಡುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ ನಲ್ಲಿಟ್ಟು ಸ್ಫೋಟಿಸಲು ಸಂಚು ಮಾಡಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.



ನವರಾತ್ರಿ ಸಂದರ್ಭದಲ್ಲಿ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ನಿಗಾ ಇಡಬೇಕು. ಟಿಫಿನ್ ಬಾಕ್ಸ್ ಆಗಿರಬಹುದು ಅಥವಾ ಲಾಜಿಸ್ಟಿಕ್ಸ್ ಗಳಲ್ಲಿ ಬರುವಂತಹ ಪಾರ್ಸಲ್ ಬಾಕ್ಸ್ ಗಳಲ್ಲಿಯೂ ಬಾಂಬ್ ಇರಬಹುದು ಎಂದು ಗುಪ್ತಚರ ಏಜನ್ಸಿ ಎಲರ್ಟ್ ಸಂದೇಶದಲ್ಲಿ ಹೇಳಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಇತ್ತೀಚೆಗಷ್ಟೇ, ಕಳೆದ ಸೆ.14ರಂದು ದೆಹಲಿ ಪೊಲೀಸರು ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರು ಮಂದಿಯನ್ನು ಬಂಧಿಸಿದ್ದರು. ಪ್ರಕರಣ ಸಂಬಂಧಿಸಿ ಹಲವರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅದರಲ್ಲಿ ಇಬ್ಬರು ಉಗ್ರರು ಪಾಕಿಸ್ಥಾನದಲ್ಲಿ ಐಎಸ್ಐ ಪ್ರೇರಿತರಾಗಿ ಬಾಂಬ್ ಸ್ಫೋಟ, ರೈಫಲ್ ಬಳಕೆ ಬಗ್ಗೆ ತರಬೇತಿ ಪಡೆದು ಬಂದಿದ್ದರು ಎನ್ನುವುದು ಬಯಲಾಗಿತ್ತು. ಅದರ ಬೆನ್ನಲ್ಲೇ ನವರಾತ್ರಿ ಮತ್ತು ಉತ್ಸವ ಸಂದರ್ಭದಲ್ಲಿ ಭಾರೀ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಏಜನ್ಸಿಗಳು ದೇಶದಲ್ಲಿ ಮತ್ತೆ ಎಲರ್ಟ್ ಘೋಷಣೆ ಮಾಡಿದೆ.
Pakistan's spy agency Inter-Services Intelligence (ISI) is reportedly planning to carry out a big terror strike in the country during the festival season, a crucial Intelligence alert has revealed.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm