ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm