ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm