ಬ್ರೇಕಿಂಗ್ ನ್ಯೂಸ್
28-09-21 05:58 pm Mangaluru Correspondent ಕ್ರೈಂ
ಮಂಗಳೂರು, ಸೆ.28: ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಪಂಪ್ ಮ್ಯಾನೇಜರ್ ಮೇಲೆ ಹಲ್ಲೆಗೈದು 4.20 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿಕೊಂಡು ಹೋದ ಘಟನೆ ನಗರದ ಚಿಲಿಂಬಿಯಲ್ಲಿ ನಡೆದಿದೆ.
ನಗರದ ಗಾಂಧಿ ನಗರದ ಆಶೀರ್ವಾದ್ ಪೆಟ್ರೋಲ್ ಪಂಪ್ ಮ್ಯಾನೇಜರ್ ಭೋಜಪ್ಪ (57) ಮಧ್ಯಾಹ್ನ 12.30ರ ಸುಮಾರಿಗೆ ಚಿಲಿಂಬಿಯ ಸಾರಸ್ವತ್ ಬ್ಯಾಂಕ್ ಶಾಖೆಗೆ ನಗದು ಕಟ್ಟಲೆಂದು 4.20 ಲಕ್ಷ ಹಣವನ್ನು ಬ್ಯಾಗಿನಲ್ಲಿ ಇಟ್ಟು ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಭೋಜಪ್ಪ ಚಿಲಿಂಬಿಯಲ್ಲಿ ಬೈಕನ್ನು ಯು ಟರ್ನ್ ಮಾಡಿ ಬರುತ್ತಿದ್ದಾಗ ಅಲ್ಲಿ ಸ್ವಿಗ್ಗಿ ಟೀ ಶರ್ಟ್ ಹಾಕ್ಕೊಂಡು ಬೈಕಿನಲ್ಲಿ ನಿಂತಿದ್ದ ಇಬ್ಬರು ಕ್ರಿಕೆಟ್ ಬ್ಯಾಟಿನಲ್ಲಿ ಹಲ್ಲೆ ನಡೆಸಿದ್ದಾರೆ.

ಭೋಜಪ್ಪ ಅವರ ತಲೆ, ಭುಜಕ್ಕೆ ಬ್ಯಾಟಿನಲ್ಲಿ ಪೆಟ್ಟು ನೀಡಿದ್ದು, ಅವರಲ್ಲಿದ್ದ ಹಣದ ಗಂಟನ್ನು ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಭೋಜಪ್ಪ ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಅಪಾಯದಿಂದ ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ತಲೆಗೆ ಪೆಟ್ಟು ಬಿದ್ದು ಅಪಾಯಕ್ಕೀಡಾಗುತ್ತಿದ್ದರು. ಭೋಜಪ್ಪ ಅವರು ಸೋಮವಾರ ಪೆಟ್ರೋಲ್ ಪಂಪಿನಲ್ಲಿ ಕಲೆಕ್ಷನ್ ಆಗಿದ್ದ 7.50 ಲಕ್ಷ ನಗದನ್ನು ಬ್ಯಾಂಕಿಗೆ ತೆರಳಿ ಕಟ್ಟಿದ್ದರು. ಇಂದು ಮಧ್ಯಾಹ್ನ ಅದೇ ರೀತಿ ಹಣ ಕಟ್ಟುವುದಕ್ಕಾಗಿ ಬ್ಯಾಂಕಿಗೆ ತೆರಳುತ್ತಿದ್ದಾಗ ಆಗಂತುಕರು ಮೊದಲೇ ಹೊಂಚು ಹಾಕಿದ್ದು ಹಲ್ಲೆಗೈದು ಹಣವನ್ನು ದರೋಡೆ ನಡೆಸಿದ್ದಾರೆ.
ಪೆಟ್ರೋಲ್ ಪಂಪ್ ಅಥವಾ ಬ್ಯಾಂಕ್ ಶಾಖೆಯಿಂದ ಈ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದರಿಂದಲೇ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
Mangalore Robbers snatch 4.20 lakhs cash from two after assaulting them with cricket bat near Chilimbi. The two were attacked by two persons who came on bike. Robbers had worn swiggy t-shirt. A case has been registered at the Urwa Police station.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm